checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 1549 (ಸಮಗ್ರ ವಚನ ಸಂಪುಟ 2) | ಶ್ರೀಗುರುಸ್ವಾಮಿ ಶಿಷ್ಯನ ಪೂರ್ವಾಶ್ರಯಮಂ ಕಳೆದು ಪುನರ್ಜಾತನಂ ಮಾಡಿದ ಬಳಿಕ, ಪಂಚಭೂತಕಾಯವ ಕಳೆದು ಪ್ರಸಾದಕಾಯವ ಮಾಡಿದ ಬಳಿಕ, ವಾಯುಪ್ರಾಣಿಯ ಕಳೆದು ಲಿಂಗಪ್ರಾಣಿಯ ಮಾಡಿದ ಬಳಿಕ, ಎಲ್ಲಿಯ ಕುಲಸೂತಕ, ಎಲ್ಲಿಯ ಛಲಸೂತಕ, ಎಲ್ಲಿಯ ತನುಸೂತಕ ಎಲ್ಲಿಯ ಮನಸೂತಕ ಎಲ್ಲಿಯ ನೆನಹುಸೂತಕ ಎಲ್ಲಿಯ ಭಾವಸೂತಕ, _ಇವನೆಂತೂ ಹಿಡಿಯಲಾಗದು, ಸದ್ಭಕ್ತನು. ಕುಲಸೂತಕವುಳ್ಳನ್ನಕ್ಕರ ಭಕ್ತನಲ್ಲ ಛಲಸೂತಕವುಳ್ಳನ್ನಕ್ಕರ ಮಹೇಶ್ವರನಲ್ಲ ತನುಸೂತಕವುಳ್ಳನ್ನಕ್ಕರ ಪ್ರಸಾದಿಯಲ್ಲ ಮನಸೂತಕವುಳ್ಳನ್ನಕ್ಕರ ಪ್ರಾಣಲಿಂಗಿಯಲ್ಲ ನೆನಹುಸೂತಕವುಳ್ಳನ್ನಕ್ಕರ ಶರಣನಲ್ಲ ಭಾವಸೂತಕವುಳ್ಳನ್ನಕ್ಕರ ಐಕ್ಯನಲ್ಲ ಇಂತೀ ಸೂತಕವ ಮುಂದುಗೊಂಡಿಪ್ಪವರ ಮುಖವ ನೋಡಲಾಗದು ಗುಹೇಶ್ವರ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 189 ಭವಿಯೊಂದು ಕುಲ ಭಕ್ತನೊಂದು ಕುಲವೆಂದು ವಿವರಣೆಯ ಮಾಡಿದ ಬಳಿಕ, ಮರಳಿಯಾ ಭವಿಯ ನ೦ಟನೆಂದು ಬೆರಸೂದು ಪಂಚಮಹಾಪಾತಕವೋ ಬಸವಾ! ಶ್ರೀಗುರು ಪೂರ್ವಾಶ್ರಯವ ಕಳೆದು ಪುನರ್ಜಾತನ ಮಾಡಿದ ಬಳಿಕ, ಪಂಚಭೂತಕಾಯವ ಕಳೆದು ಪ್ರಸಾದಕಾಯವ ಮಾಡಿದ ಬಳಿಕ, ವಾಯುಪ್ರಾಣಿಯ ಕಳೆದು ಲಿಂಗಪ್ರಾಣಿಯ ಮಾಡಿದ ಬಳಿಕ, ಎಲ್ಲಿಯ ಕುಲಸೂತಕ? ಎಲ್ಲಿಯ ಛಲಸೂತಕ? ಎಲ್ಲಿಯ ತನುಸೂತಕ? ಎಲ್ಲಿಯ ಮನಸೂತಕ? ಎಲ್ಲಿಯ ನೆನಹುಸೂತಕ? ಎಲ್ಲಿಯ ಭಾವಸೂತಕ? ಇವನೆಂದೂ ಹಿಡಿಯಲಾಗದು. ಕುಲಸೂತಕವುಳ್ಳನ್ನಕ್ಕ ಭಕ್ತನಲ್ಲ. ಛಲಸೂತಕವುಳ್ಳನ್ನಕ್ಕ ಮಾಹೇಶ್ವರನಲ್ಲ. ತನುಸೂತಕವುಳ್ಳನ್ನಕ್ಕ ಪ್ರಸಾದಿಯಲ್ಲ. ಮನಸೂತಕವುಳ್ಳನ್ನಕ್ಕ ಪ್ರಾಣಲಿಂಗಿಯಲ್ಲ. ನೆನಹುಸೂತಕವುಳ್ಳನ್ನಕ್ಕ ಶರಣನಲ್ಲ. ಭಾವಸೂತಕವುಳ್ಳನ್ನಕ್ಕ ಲಿಂಗೈಕ್ಯನಲ್ಲ- ಇಂತೀ ಸೂತಕವ ಮುಂದುಗೊಂಡಿಪ್ಪವರ ಮುಖವ ನೋಡಲಾಗದು ಗೊಹೇಶ್ವರಾ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |