checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 1554 (ಸಮಗ್ರ ವಚನ ಸಂಪುಟ 6) | ಶಿವ ತನ್ನ ವಿನೋದಕ್ಕೆ ರಚಿಸಿದನು, ಅನಂತ ವಿಶ್ವವನು. ರಚಿಸಿದವನು ವಿಶ್ವಕ್ಕೆ ಹೊರಗಾಗಿರ್ದನೆ ? ಇಲ್ಲ. ವಿಶ್ವಮಯ ತಾನಾದನು, ವಿಶ್ವವೆಲ್ಲವೂ ತಾನಾದಡೆ ವಿಶ್ವದುತ್ಪತ್ತಿಸ್ಥಿತಿಲಯಕ್ಕೊಳಗಾದನೇ ? ಇಲ್ಲ. ಅದೇನು ಕಾರಣವೆಂದಡೆ; ಅಜಾತನಾಗಿ ಉತ್ಪತ್ತಿ ಇಲ್ಲ, ಕರ್ಮರಹಿತನಾಗಿ ಸ್ಥಿತಿಗೊಳಗಲ್ಲ. ಮರಣರಹಿತನಾಗಿ ಲಯಕ್ಕೊಳಗಲ್ಲ, ಇಂತೀ ಗುಣತ್ರಯಂಗಳ ಹೊದ್ದಲರಿಯ. ತಾನಲ್ಲದೆ ವಿಶ್ವಕ್ಕಾಧಾರವಿಲ್ಲಾಗಿ ದೂರಸ್ಥನಲ್ಲ. ತನ್ನಲ್ಲಿ ತಾನಲ್ಲದ ಅನ್ಯವು ತೋರಲರಿಯದಾಗಿ, ಇದಿರಿಲ್ಲ. ಇದಿರಿಲ್ಲಾಗಿ ವಿಶ್ವಮಯ ತಾನಾದುದೇ ಸತ್ಯ. ಅರಸು ಕಾಲಾಳಾಗಬಲ್ಲ ತನ್ನ ವಿನೋದಕ್ಕೆ, ಮರಳಿ ಅರಸಾಗಬಲ್ಲ. ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನು, ಜಗವಾಗಲೂ ಬಲ್ಲ, ಜಗವಾಗದಿರಲೂ ಬಲ್ಲನಯ್ಯ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 226 ಶಿವ ತನ್ನ ವಿನೋದಕ್ಕೆ ರಚಿಸಿದನನಂತ ವಿಶ್ವವನು. ರಚಿಸಿ ಏನು ವಿಶ್ವಕ್ಕೆ ಹೊಱಗಾಗಿದ್ದನೆ? ಇಲ್ಲ. ವಿಶ್ವಮಯ ತಾನಾದನು. ವಿಶ್ವವೆಲ್ಲವು ತಾನಾದನೆಂದಡೆ, ವಿಶ್ವದ ಉತ್ಪತ್ಯ ಸ್ಥಿತಿ ಲಯಕ್ಕೊಳಗಾದನೆ? ಇಲ್ಲ. ಅದೇನು ಕಾರಣವೆಂದಡೆ, ಅಜಾತನಾಗಿ ಉತ್ಪತ್ಯನಲ್ಲ; ಸ್ಥಿತಿ ಕರ್ಮರಹಿತನಾಗಿ ಸ್ಥಿತಿಗೆ ಒಳಗಲ್ಲ; ಮರಣ ರಹಿತನಾಗಿ ಲಯಕ್ಕೊಳಗಲ್ಲ. ಇಂತೀ ಗುಣತ್ರಯಂಗಳ ಹೊದ್ದಲಱಿಯ. ತಾನಿಲ್ಲದೆ ವಿಶ್ವಕ್ಕಾಧಾರವಿಲ್ಲಾಗಿ, ದೂರಸ್ಥನಲ್ಲ. ತನ್ನಲ್ಲಿ ತಾನಲ್ಲದೆ ಅನ್ಯವು ತೋಱಲಱಿಯದಾಗಿ, ಇದಿರಿಲ್ಲ. ಇದಿರಿಲ್ಲವಾಗಿ, ವಿಶ್ವಮಯ ತಾನಾದುದೇ ಸತ್ಯ ಅರಸು ಕಾಲಾಳಾಗಬಲ್ಲ, ತನ್ನ ವಿನೋದಕ್ಕೆ ಮರಳಿ ಅರಸಾಗಬಲ್ಲ. ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನು ಜಗವಾಗಬಲ್ಲ, ಜಗವಾಗದಿರಲೂ ಬಲ್ಲ.
×
ಪಠ್ಯಗಳಲ್ಲಿನ ವ್ಯತ್ಯಾಸ
| ||||||
| ಲಿಂಗಲೀಲಾವಿಲಾಸಚಾರಿತ್ರ, ಕಲ್ಲುಮಠದ ಪ್ರಭುದೇವ ಪು ಸಂ‖ ವಚನ ಸಂಖ್ಯೆ 48‖06 ಶಿವ ತನ್ನ ವಿನೋದಕ್ಕೆ ರಚಿಸಿದನನಂತ ವಿಶ್ವವ. ರಚಿಸಿ ಏನು ವಿಶ್ವಕ್ಕೆ ಹೊಱಗಾಗಿದ್ದನೇ ? ಇಲ್ಲ. ವಿಶ್ವಮಯ ತಾನಾದನು. ವಿಶ್ವವೆಲ್ಲವೂ ತಾನಾದನೆಂದರೆ ವಿಶ್ವದ ಉತ್ಪತ್ಯ ಸ್ಥಿತಿ ಲಯಕ್ಕೊಳಗಾದಾತನೇ? ಅಲ್ಲ. ಅದೇನು ಕಾರಣವೆಂದಡೆ; ಅಜಾತನಾಗಿ ಉತ್ಪತ್ಯನಲ್ಲ. ಸ್ಥಿತಿ ಕರ್ಮ ರಹಿತವಾಗಿ ಸ್ಥಿತಿಗೊಳಗಲ್ಲ. ಮರಣ ವಿರಹಿತನಾಗಿ ಲಯಕ್ಕೆ ಒಳಗಲ್ಲ, ಇಂತೀ ಗುಣತ್ರಯಂಗಳು ಹೊದ್ದಲಱಿಯವು. ತಾನಲ್ಲದೆ ವಿಶ್ವಕ್ಕಾಧಾರವಿಲ್ಲಾಗಿ ದೂರಸ್ಥನಲ್ಲ. ತನ್ನಲ್ಲಿ ತಾನಲ್ಲದೆ ಅನ್ಯವು ತೋಱಲಱಿಯದಾಗಿ, ಇದಿರಿಲ್ಲ. ಇದಿರಿಲ್ಲವಾಗಿ ವಿಶ್ವಮಯವು ತಾನಾದುದೇ ಸತ್ಯ. ಅರಸು ಕಾಲಾಳಾಗಬಲ್ಲ ತನ್ನ ವಿನೋದಕ್ಕೆ, ಮರಳಿ ಅರಸಾಗಬಲ್ಲ. ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನು, ಜಗವಾಗಲೂ ಬಲ್ಲ, ಜಗವಾಗದಿರಲೂ ಬಲ್ಲನಯ್ಯ. ಗಮನಿಸಿ:
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |