checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 22 (ಸಮಗ್ರ ವಚನ ಸಂಪುಟ 3) | ಹರ ತನ್ನ ರೂಪ ತೋರಬೇಕೆಂದು, ಗುರುರೂಪಾಗಿ ಬಂದು ಮನಸ್ಥಲಕ್ಕೆ ಮಂತ್ರವಾದ, ತನುಸ್ಥಲಕ್ಕೆ ಪ್ರಸಾದವಾದ, ಕರಸ್ಥಲಕ್ಕೆ ಲಿಂಗವಾದ ಇಂತೀ ತ್ರಿವಿಧದಲ್ಲಿ ತ್ರಿವಿಧ ಸಾಹಿತ್ಯವಾದನಯ್ಯಾ ಕೂಡಲಚೆನ್ನಸಂಗನ[ಲ್ಲಿ] ಬಸವಣ್ಣನು. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 112 ಹರ ತನ್ನ ರೂಪ ತೋಱಬೇಕೆಂದು ಗುರುರೂಪಾಗಿ ಬಂದು, ಮನಸ್ಥಲಕ್ಕೆ ಮಂತ್ರವಾದ, ತನುಸ್ಥಲಕ್ಕೆ ಪ್ರಸಾದವಾದ, ಕರಸ್ಥಲಕ್ಕೆ ಲಿಂಗವಾದ, ಪ್ರಾಣಸ್ಥಲಕ್ಕೆ ಜಂಗಮವಾದ. ಇಂತು ಚತುರ್ವಿಧ ಸಾಹಿತ್ಯ, ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನೊಬ್ಬನೆ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |