checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 225 (ಸಮಗ್ರ ವಚನ ಸಂಪುಟ 3) | ಗುರುವೆನ್ನ ತನುವ ಬೆರಸಿದ ಕಾರಣ, ಗುರುವಿನ ತನುವ ನಾ ಬೆರಸಿದ ಕಾರಣ, ಗುರು ಶುದ್ಧನಾದನಯ್ಯಾ. ಲಿಂಗವೆನ್ನ ಮನವ ಬೆರಸಿದ ಕಾರಣ, ಲಿಂಗದ ಮನವ ನಾ ಬೆರಸಿದ ಕಾರಣ, ಲಿಂಗ ಶುದ್ಧವಾದನಯ್ಯಾ. ಜಂಗಮವೆನ್ನ ಜಿಹ್ವೆಯ ಬೆರಸಿದ ಕಾರಣ, ಜಂಗಮದ ಜಿಹ್ವೆಯ ನಾ ಬೆರಸಿದ ಕಾರಣ ಜಂಗಮ ಶುದ್ಧನಾದನಯ್ಯಾ ಈ ಮೂವರು ತಮ್ಮಿಂದ ತಾವಾಗಲರಿಯದೆ ಎನ್ನ ಮುಟ್ಟಿ ಶುದ್ಧವಾದರು ಕಾಣಾ, ಕೂಡಲಚೆನ್ನಸಂಗಮದೇವಾ |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 108 ಗುರುವೆನ್ನ ತನುವ ಬೆರಸಿದ ಕಾರಣ, ಗುರುವಿನ ತನುವ ನಾ ಬೆರಸಿದ ಕಾರಣ, ಗುರು ಶುದ್ಧವಾದನಯ್ಯಾ. ಲಿಂಗವೆನ್ನ ಮನವ ಬೆರಸಿದ ಕಾರಣ, ಲಿ೦ಗದ ಮನವ ನಾ ಬೆರಸಿದ ಕಾರಣ, ಲಿಂಗ ಶುದ್ಧವಾದನಯ್ಯಾ ಜಂಗಮವೆನ್ನ ಜಿಹ್ವೆಯ ಬೆರಸಿದ ಕಾರಣ, ಜ೦ಗಮದ ಜಿಹ್ವೆಯ ನಾ ಬೆರಸಿದ ಕಾರಣ, ಜಂಗಮ ಶುದ್ಧವಾದನಯ್ಯಾ ಈ ಮೂವರು ತಮ್ಮಿಂದ ತಾವೆ ಶುದ್ಧವಾಗಲಱಿಯದೆ, ಎನ್ನ ಮುಟ್ಟಿ ಶುದ್ಧವಾದರು ಕಾಣಾ ಕೂಡಲಚೆನ್ನಸಂಗಮದೇವಾ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |