checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 300 (ಸಮಗ್ರ ವಚನ ಸಂಪುಟ 9) | ಅಷ್ಟತನುಮೂರ್ತಿ ಶಿವನೆಂಬ ಕಷ್ಟಜೀವಿಗಳನೇನೆಂಬೆನಯ್ಯಾ? ಯುಗಜುಗಂಗಳು ಪ್ರಳಯವಹಲ್ಲಿ ಧರೆ ಜಲದಲ್ಲಿ ಅಡಗಿತ್ತು, ಜಲ ಅಗ್ನಿಯಲ್ಲಿ ಅಡಗಿತ್ತು, ಅಗ್ನಿ ವಾಯುವಿನಲ್ಲಿ ಅಡಗಿತ್ತು, ವಾಯು ಆಕಾಶದಲ್ಲಿ ಅಡಗಿತ್ತು, ಆಕಾಶ ಅತೀತನಲ್ಲಿ ಅಡಗಿತ್ತು, ಅತೀತ ಆದಿಯೊಳಗಡಗಿತ್ತು, ಆದಿ ಅನಾದಿಯೊಳಡಗಿತ್ತು, ಅನಾದಿ ನಿಜದೊಳಡಗಿತ್ತು. ಇಂತೀ ಅಷ್ಟತನು ಒಂದರೊಳಗೊಂದಳಿವಲ್ಲಿ, ಒಂದರೊಳಗೊಂದು ಹುಟ್ಟುವಲ್ಲಿ, ಎಂದಳಿದನೆಂದು, ಹುಟ್ಟಿದನೆಂದು ಬಲ್ಲವರುಂಟೆ? ಹುಟ್ಟಿದನಳಿದವನೆಂಬ ಶಬ್ದವ ನುಡಿಯಲಾಗದು. ಇದು ಕಾರಣ, ನಮ್ಮ ಮಹಾಘನ ಸೋಮೇಶ್ವರನು ಮಾಡಿದಡಾದವು, ಬೇಡಾ ಎಂದಡೆ ಮಾದವು. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 218 ಅಷ್ಟತನುಮೂರ್ತಿ ಶಿವನೆಂಬ ಕಷ್ಟಜೀವಿಗಳನೇನೆಂಬೆನಯ್ಯಾ? ಯುಗಜುಗಂಗಳು ಪ್ರಳಯವಹಲ್ಲಿ, ಧರೆ ಜಲದಲ್ಲಿ ಅಡಗಿತ್ತು; ಜಲ ಅಗ್ನಿಯಲ್ಲಿ ಅಡಗಿತ್ತು; ಅಗ್ನಿ ವಾಯುವಿನಲ್ಲಿ ಅಡಗಿತ್ತು. ವಾಯು ಆಕಾಶದಲ್ಲಿ ಅಡಗಿತ್ತು; ಆಕಾಶ ಅತೀತನಲ್ಲಿ ಅಡಗಿತ್ತು; ಅತೀತ ಆದಿಯೊಳಗಡಗಿತ್ತು ಆದಿ ಅನಾದಿಯೊಳಗಡಗಿತ್ತು; ಅನಾದಿ ನಿಜದೊಳಗಡಗಿತ್ತು. ಇಂತೀ ಅಷ್ಟತನು ಒಂದರೊಳ ಗೊಂದಳಿವಲ್ಲಿ, ಒಂದಱೊಳಗೊಂದು ಹುಟ್ಟುವಲ್ಲಿ, ಎಂದಳಿದನೆಂದು ಬಲ್ಲವರುಂಟೆ? ಹುಟ್ಟಿದನಳಿದನೆಂಬ ಶಬ್ದವ ನುಡಿಯಲಾಗದು. ಇದು ಕಾರಣ, ನಮ್ಮ ಮಹಾಘನ ಸೋಮೇಶ್ವರನು ಮಾಡಿದಡಾದವು, ಬೇಡೆ೦ದಡೆ ಮಾದವು.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |