checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 366 (ಸಮಗ್ರ ವಚನ ಸಂಪುಟ 1) | ಹೊಲಬುಗೆಟ್ಟ ಶಿಶು ತನ್ನ ತಾಯ ಬಯಸುವಂತೆ, ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ, ಬಯಸುತ್ತಿರ್ದೆನಯ್ಯಾ ನಿಮ್ಮ ಶರಣರ ಬರವನು. ಬಯಸುತ್ತಿರ್ದೆನಯ್ಯಾ ನಿಮ್ಮ ಭಕ್ತರ ಬರವನು. ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ ಎನಗೆ ನಿಮ್ಮ ಶರಣರ ಬರವು, ಕೂಡಲಸಂಗಮದೇವಾ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 74 ಹೊಲಬುಗೆಟ್ಟ ಶಿಶು ತನ್ನ ತಾಯನಱಸುವಂತೆ, ಬಳಿದಪ್ಪಿದ ಕಱು ತನ್ನ ಹಿಂಡ ತಾನಱಸುವಂತೆ ಬಯಸುತ್ತಿದ್ದೆನಯ್ಯಾ, ನಿಮ್ಮ ಭಕ್ತರ ಬರವ ಬಯಸುತ್ತಿದ್ದೆನಯ್ಯಾ, ನಿಮ್ಮ ಶರಣರ ಬರವ. ದಿನಕರನುದಯಕ್ಕೆ ಕಮಲ ವಿಕಸಿತವಾದಂತೆ-ಎನಗೆ ನಿಮ್ಮ ಶರಣರ ಬರವು ಕೂಡಲಸಂಗಮದೇವಾ!
×
ಪಠ್ಯಗಳಲ್ಲಿನ ವ್ಯತ್ಯಾಸ
| ||||||
| ಮಹದೇವಯ್ಯನ 'ಶೂನ್ಯ ಸಂಪಾದನೆ', ವಚನ ಸಂ 677 ಹೊಲಬುಗೆಟ್ಟು ಶಿಶು ತನ್ನ ತಾಯ ಬಯಸುವಂತೆ, ಬಳಿದಪ್ಪಿದ ಕಱು ತನ್ನ ಹಿಂಡ ಬಯಸುವಂತೆ ಬಯಸುತಿದ್ದೆನಯ್ಯ ನಿಮ್ಮ ಶರಣರ ಬರವನು! ದಿನಕರನುದಯಕ್ಕೆ ಕಮಲ ವಿಕಸಿತಮಪ್ಪಂತೆ ಎನಗೆ ನಿಮ್ಮ ಶರಣರ ಬರವು, ಕೂಡಲ ಸಂಗಮದೇವ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |