checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 426 (ಸಮಗ್ರ ವಚನ ಸಂಪುಟ 5) | ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ, ಬೆಳೆದೆನು ಅಸಂಖ್ಯಾತರ ಕರುಣದೊಳಗೆ. ಭಾವವೆಂಬ ಹಾಲು, ಸುಜ್ಞಾನವೆಂಬ ತುಪ್ಪ, ಪರಮಾರ್ಥವೆಂಬ ಸಕ್ಕರೆಯನಿಕ್ಕಿದರು ನೋಡಾ. ಇಂತಪ್ಪ ತ್ರಿವಿಧಾಮೃತವನು ದಣಿಯಲೆರೆದು ಸಲಹಿದಿರೆನ್ನ. ವಿವಾಹವ ಮಾಡಿದಿರಿ, ಸಯವಪ್ಪ ಗಂಡಂಗೆ ಕೊಟ್ಟಿರಿ, ಕೊಟ್ಟ ಮನೆಗೆ ಕಳುಹಲೆಂದು ಅಸಂಖ್ಯಾತರೆಲ್ಲರೂ ನೆರೆದು ಬಂದಿರಿ. ಬಸವಣ್ಣ ಮೆಚ್ಚಲು ಒಗತನವ ಮಾಡುವೆ. ಚೆನ್ನಮಲ್ಲಿಕಾರ್ಜುನನ ಕೈವಿಡಿದು ನಿಮ್ಮ ತಲೆಗೆ ಹೂವ ತಹೆನಲ್ಲದೆ ಹುಲ್ಲ ತಾರೆನು. ಅವಧರಿಸಿ, ನಿಮ್ಮಡಿಗಳೆಲ್ಲರೂ ಮರಳಿ ಬಿಯಂಗೈವುದು, ಶರಣಾರ್ಥಿ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 41 ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ. ಬೆಳೆದೆನು ಅಸಂಖ್ಯಾತರ ಕರುಣದೊಳಗೆ. ಭಾವವೆಂಬ ಹಾಲು, ಸುಜ್ಜಾನವೆಂಬ ತುಪ್ಪ, ಪರಮಾರ್ಥವೆಂಬ ಸಕ್ಕರೆಯನಿಕ್ಕಿದರು ನೋಡಾ! ಇಂತಪ್ಪ ತ್ರಿವಿಧಾಮೃತವನು ದಣಿಯಲೆಱೆದು ಸಲಹಿದಿರೆನ್ನ. ವಿವಾಹವ ಮಾಡಿದಿರಿ; ಸ್ವಯವಪ್ಪ ಗ೦ಡ೦ಗೆ ಕೊಟ್ಟಿರಿ. ಕೊಟ್ಟ ಮನೆಗೆ ಕಳುಹಲೆ೦ದು ಅಸಂಖ್ಯಾತರೆಲ್ಲರೂ ನೆರೆದು ಬಂದಿರಿ. ಬಸವಣ್ಣ ಮೆಚ್ಚಲು ಒಕತನವ ಮಾಡುವೆ, ಚೆನ್ನಮಲ್ಲಿಕಾರ್ಜುನನೆಂಬ ಗ೦ಡನ ಕೈವಿಡಿದು, ನಿಮ್ಮ ತಲೆಗೆ ಹೂವ ತಹೆನಲ್ಲದೆ ಹುಲ್ಲ ತಾರೆನು. ಅವಧರಿಸಿ, ನಿಮ್ಮಡಿಗಳೆಲ್ಲರೂ. ಮರಳಿ ಬಿಜಯಂಗೆಯ್ವುದು. ಶರಣಾರ್ಥಿ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |