checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 431 (ಸಮಗ್ರ ವಚನ ಸಂಪುಟ 3) | ಆಹ್ವಾನಿಸುವಲ್ಲಿ ಪ್ರಾಣಲಿಂಗವಿಲ್ಲ, ವಿಸರ್ಜಿಸುವಲ್ಲಿ ಲಿಂಗವಂತರಿಸಿತ್ತು. ಆಹ್ವಾನಿಸುವನಲ್ಲ, ವಿಸರ್ಜಿಸುವನಲ್ಲ, ಶರಣನ ಪರಿ ಬೇರೆ. ಲಿಂಗಭೋಗೋಪಭೋಗವಲ್ಲದೆ, [ಅನರ್ಪಿತವ] ಭೋಗಿಸುವನಲ್ಲ. ಆಗಲೂ ಪ್ರಾಣಲಿಂಗಸಂಗದಲ್ಲಿಯೆ ಇಪ್ಪನು. ಇದು ಕಾರಣ ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣಂಗೆ ನಮೋ ನಮೋ ಎಂಬೆ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 211 ಆಹ್ವಾನಿಸುವಲ್ಲಿ ಪ್ರಾಣಲಿ೦ಗವಿಲ್ಲ. ವಿಸರ್ಜಿಸುವಲ್ಲಿ ಲಿಂಗವಂತನೆಂತೆನಬಹುದು? ಆಹ್ವಾನ ವಿಸರ್ಜನವಿಲ್ಲದ ಶರಣನ ಪರಿ ಬೇಱೆ ಲಿಂಗಭೋಗೋಪಭೋಗವಲ್ಲದೆ ಅನರ್ಪಿತವ ಭೋಗಿಸುವನಲ್ಲ. ಆಗಳೂ ಪ್ರಾಣಲಿಂಗದ ಸಂಗದಲ್ಲಿಪ್ಪನು. ಇದು ಕಾರಣ, ಕೂಡಲಚೆನ್ನಸಂಗಯ್ಯಾ, ನಿಮ್ಮ ಶರಣ೦ಗೆ ನಮೋ ಎಂಬೆ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |