checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 498 (ಸಮಗ್ರ ವಚನ ಸಂಪುಟ 1) | ಎನಗೆ ನಿಮ್ಮ ನೆನಹಾದಾಗ ಉದಯ, ಎನಗೆ ನಿಮ್ಮ ಮರಹಾದಾಗ ಅಸ್ತಮಾನ. ಎನಗೆ ನಿಮ್ಮ ನೆನೆಹವೆ ಜೀವನ, ಎನಗೆ ನಿಮ್ಮ ನೆನಹವೆ ಪ್ರಾಣ, ಕಾಣಾ ತಂದೆ. ಸ್ವಾಮಿ, ಎನ್ನ ಹೃದಯದಲ್ಲಿ ನಿಮ್ಮ ಚರಣದುಂಡಿಗೆಯನೊತ್ತಯ್ಯಾ, ವದನದಲಿ ಷಡಕ್ಷರಿಯ ಬರೆಯಯ್ಯಾ ಕೂಡಲಸಂಗಮದೇವಾ |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 498 ಎನಗೆ ನಿಮ್ಮ ನೆನಹಾದಾಗವೆ ಉದಯ; ಎನಗೆ ನಿಮ್ಮ ಮಱಹಾದಾಗವೆ ಅಸ್ತಮಾನ. ಎನಗೆ ನಿಮ್ಮ ನೆನಹವೆ ಜೀವ, ಎನಗೆ ನಿಮ್ಮ ನೆನಹವೆ ಪಾಣ ಕಾಣಾ ತಂದೆ! ಎಲೆ ಸ್ವಾಮಿ, ಎನ್ನ ಹೃದಯದಲ್ಲಿ ನಿಮ್ಮ ಚರಣದುಂಡಿಗೆಯನೊತ್ತಯ್ಯಾ, ವದನದಲ್ಲಿ ಷಡಕ್ಷರಿಯ ಬರೆಯಯ್ಯಾ, ಕೂಡಲಸಂಗಮದೇವಯ್ಯಾ
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |