checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 508 (ಸಮಗ್ರ ವಚನ ಸಂಪುಟ 3) | ಗತಿಪದಮುಕ್ತಿಯ ಬಯಸಿ ಮಾಡುವಾತ ಭಕ್ತನಲ್ಲ, ಜೀವನೋಪಾಯಕ್ಕೆ ಬೇಡುವಾತ ಜಂಗಮವಲ್ಲ. ಗತಿಪದ ಮುಕ್ತಿಸೂತಕವಿರಹಿತ ಭಕ್ತ, ಹಮ್ಮು ಬಿಮ್ಮು ಗಮನನಾಸ್ತಿ ಜಂಗಮ. ಮಾಡುವಡೆ ಭಕ್ತ ಮಾಟದೊಳಗಿಲ್ಲದಿರಬೇಕು, ಬೇಡುವಡೆ ಜಂಗಮ ಕೊಂಬುದರೊಳಗಿಲ್ಲದಿರಬೇಕು. ಪ್ರಾಣವಿಲ್ಲದ ಭಕ್ತ ರೂಹಿಲ್ಲದ ಜಂಗಮ, ಉಭಯಕುಳ ಸಂದಳಿದಂದು ಕೂಡಲಚೆನ್ನಸಂಗನಲ್ಲಿ ಭಕ್ತಜಂಗಮವೆಂಬೆ |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 87 ಗತಿ ಪಥ ಮುಕ್ತಿಯ ಬಯಸಿ ಮಾಡುವಾತ ಭಕ್ತನಲ್ಲ; ಜೀವನೋಪಾಯಕ್ಕೆ ಬೇಡುವಾತ ಜ೦ಗಮವಲ್ಲ. ಗತಿ ಪಥ ಮುಕ್ತಿಸೂತಕವಿರಹಿತ ಭಕ್ತ: ಹಮ್ಮು ಬಿಮ್ಮು ಗಮನ ನಾಸ್ತಿ ಜಂಗಮವೆ. ಮಾಡುವಡೆ, ಭಕ್ತ ಮಾಟದೊಳಗಿಲ್ಲದಿರಬೇಕು; ಬೇಡುವಡೆ, ಜ೦ಗಮ ಕೊಂಬುದಱೊಳಗಿಲ್ಲ ದಿರಬೇಕು; ಕಾಯವಿಲ್ಲದಾತ ಭಕ್ತ ರೂಹಿಲ್ಲದಾತ ಜ೦ಗಮ. ಈ ಉಭಯ ಕುಳ ಸ್ಥಲದ ಸಂದೊಂದಾಗಿ ನಿಂದ ನಿಲವು, ಕೂಡಲಚೆನ್ನಸಂಗಮದೇವರಲ್ಲಿ ಭಕ್ತ ಜಂಗಮವೆಂಬೆ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |