checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 559 (ಸಮಗ್ರ ವಚನ ಸಂಪುಟ 8) | ಕಾಮಕ್ರೋಧದ ಕರಸ್ಥಲದಲ್ಲಿ ಗುರು ಸ್ವಾಯತವ ಮಾಡಿದೆನು. ಲೋಭಮೋಹದ ಕರಸ್ಥಲದಲ್ಲಿ ಲಿಂಗ ಸ್ವಾಯತವ ಮಾಡಿದೆನು. ಮದದ ಕರಸ್ಥಲದಲ್ಲಿ ಜಂಗಮ ಸ್ವಾಯತವ ಮಾಡಿದೆನು. ಮತ್ಸರದ ಕರಸ್ಥಲದಲ್ಲಿ ಪ್ರಸಾದ [ಸ್ವಾಯತವ] ಮಾಡಿದೆನು. ಇಂತೀ ಗುರುಲಿಂಗ ಜಂಗಮ ಪ್ರಸಾದದಲ್ಲಿ ಶುದ್ಧನಾದೆನು ಕಾಣಾ ಕಲಿದೇವರದೇವಾ |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 102 ಕಾಮದ ಕರಸ್ಥಲದಲ್ಲಿ ಲಿ೦ಗಸ್ವಾಯತವ ಮಾಡುವೆ. ಕ್ರೋಧದ ನಯನದಲ್ಲಿ ಜಂಗಮಸ್ವಾಯತವ ಮಾಡುವೆ. ಜಿಹ್ವೆಯ ಕೊನೆಯಲ್ಲಿ ಪ್ರಸಾದ ಸ್ವಾಯತವ ಮಾಡುವೆ-ಇಂತೀ ತ್ರಿವಿಧದಲ್ಲಿ ಸನ್ನಿಹಿತನಾದೆನು ಕಾಣಾ ಕಲಿದೇವಯ್ಯಾ
×
ಪಠ್ಯಗಳಲ್ಲಿನ ವ್ಯತ್ಯಾಸ
| ||||||
| ಮಹದೇವಯ್ಯನ 'ಶೂನ್ಯ ಸಂಪಾದನೆ', ವಚನ ಸಂ 556 ಕಾಮದ ಕರಸ್ಥಲದಲ್ಲಿ ಗುರುಸ್ವಾಯತವ ಮಾಡಿದೆನು. ಕ್ರೋಧದ ನಯನದಲ್ಲಿ ಜಂಗಮಸ್ವಾಯತವ ಮಾಡಿದೆನು. ಲೋಭಿವಿಲ್ಲದ ಪ್ರಸಾದವ ಗ್ರಹಿಸುವೆನು. ಇಂತೀ ತ್ರಿವಿಧದಲ್ಲಿ ಶುದ್ಧನಾದೆನು ಕಾಣಾ ಕಲಿದೇವರ ದೇವ ನಿಮ್ಮ ಶರಣ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |