checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 782 (ಸಮಗ್ರ ವಚನ ಸಂಪುಟ 1) | ಲಿಂಗಪ್ರಸಾದಿಗಳಲ್ಲದವರ ಸಂಗ ಭಂಗವೆಂದುದು ಗುರುವಚನ. ಲಿಂಗಪ್ರಸಾದಿಗಳಲ್ಲದವರ ಸಂಗಗ ಪಂಚಮಹಾಪಾತಕವೆಂದುದು ಲಿಂಗವಚನ. ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ ಇಂತೆಂದುದಾಗಿ ಕೂಡಲಸಂಗಮದೇವಾ, ನಿಮ್ಮ ಶರಣರಿಗೆ ಶರಣೆಂದು ಶುದ್ಧನಯ್ಯಾ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 245 ಲಿಂಗಪ್ರಸಾದಿಗಳಲ್ಲದವರ ಸಂಗ ಪಂಚ ಮಹಾಪಾತಕವೆಂದಿತ್ತು ಗುರುವಚನ. ಲಿಂಗಪ್ರಸಾದಿಗಳಲ್ಲದವರ ಸಂಗ ಭಂಗವೆಂದಿತ್ತು ಲಿಂಗವಚನ, ಸಾಕ್ಷಿ: «ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ» ಎಂದುದಾಗಿ, ಕೂಡಲಸಂಗಮದೇವಯ್ಯಾ, ನಿಮ್ಮ ಶರಣರಿಗೆ ಶರಣೆಂದು ಶುದ್ಧ ನಾನಯ್ಯ
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |